ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಎಂಎಲ್ಸಿ ಪಾರು
ವಿಜಯಪುರ: ನಗರದ ಗಾಂಧಿ ಚೌಕ್ ಬಳಿ ಎಂಎಲ್ಸಿ ಅರುಣ್ ಶಹಾಪುರ ಅವರು ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ವರದಿಯಾಗಿದೆ.
ಈ ಘಟನೆಯಲ್ಲಿ ಎಂಎಲ್ಸಿ ಅರುಣ್ ಶಹಾಪುರ ಅವರು ಪಾರಾಗಿದ್ದು, ಯಾವುದೇ ಗಾಯಗಳಾದ ವರದಿಯಾಗಿಲ್ಲ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.